33.3 C
Kadaba
Saturday, March 15, 2025

ಹೊಸ ಸುದ್ದಿಗಳು

ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬೆಳಾಲಿನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಸಿಕ್ತು ಮಹತ್ವದ ಸುಳಿವು

Must read

 ಧರ್ಮಸ್ಥಳ
ಠಾಣಾ ವ್ಯಾಪ್ತಿಯ ಉಜಿರೆ ಸಮೀಪದ
  ಬೆಳಾಲಿನಲ್ಲಿ ನಿವೃತ್ತ
ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಪೊಲೀಸರಿಗೆ
ಸಿಕ್ಕಿದೆ.

kadabatimes.in


kadabatimes.in

ಆಸ್ತಿ
ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ ಎನ್ನಲಾಗಿದ್ದು ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ
ಮಾಹಿತಿ ಲಭಿಸಿದೆ. ಇವರಿಬ್ಬರು  ಮೃತ ಬಾಲಕೃಷ್ಣ ಭಟ್
ಅವರ ಕುಟುಂಬದ ಹತ್ತಿರದ ಸಂಬಂಧಿಗಳಾಗಿರುವ ಕೇರಳ ಕಾಸರಗೋಡಿನವರು ಎಂದು ಹೇಳಲಾಗುತ್ತಿದೆ.


kadabatimes.in

ಒಬ್ಬ
ಆರೋಪಿ ಕೇರಳದಲ್ಲಿ ಈ ಹಿಂದೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಿದೆ ಎಂದು ತಿಳಿದು
ಬಂದಿದೆ. ಅಪರಾಧ ಪ್ರಕರಣದಲ್ಲಿ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಈಗಾಗಲೇ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


kadabatimes.in

ಜಾಗ
ಹಂಚಿಕೆ ಮಾಡುವ ವಿಚಾರದಲ್ಲಿ   ಈ ಕೃತ್ಯವನ್ನು ಎಸಗಿದ್ದಾರೆ ಎಂದು ಪೊಲೀಸ್ ತನಿಖೆಯಲ್ಲಿ
ಬಹಿರಂಗಗೊಂಡಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಆರೋಪಿಗಳ ಜಾಡು ಹಿಡಿದಿದ್ದು
ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇನ್ನು  ಕೊಲೆಯಲ್ಲಿ ಯಾರೆಲ್ಲ ಭಾಗಿಗಳಾಗಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ
ಮಾಹಿತಿ ತಿಳಿದುಬರಬೇಕಾಗಿದೆ.