24.2 C
Kadaba
Saturday, March 15, 2025

ಹೊಸ ಸುದ್ದಿಗಳು

ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲೊಂದು ಅಮಾನವೀಯ ಘಟನೆ:ರಾತ್ರಿ ಮಲಗಿದ್ದ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ

Must read

 ಸುಳ್ಯ:  ರಾತ್ರಿ
ಮಲಗಿರುವಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿರುವ ಘಟನೆ ನಡೆದಿರುವುದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ
ನಡೆದಿರುವುದು
ತಿಳಿದು
ಬಂದಿದೆ.

kadabatimes.in

ಬೆಳ್ಳಾರೆ ಪೊಲೀಸ್ ಠಾಣೆಯ ಚಿತ್ರ


kadabatimes.in

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ  .12
ರಂದು  
ಘಟನೆ ನಡೆದಿದೆ
.


ಜಯಭಾರತಿ (56) ಎಂಬವರು  ರಾತ್ರಿ
ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಭಾವ ಶಂಕರ ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.ಗಂಭೀರ ಗಾಯಗೊಂಡ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

kadabatimes.in


ಬೆಂಕಿ ಹಚ್ಚಿರುವ ವ್ಯಕ್ತಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಟುಂಬಿಕ ವಿವಾದದ ಹಿನ್ನಲೆಯಲ್ಲಿ ಕೃತ್ಯ ಎಸಗಿರುವ ಬಗ್ಗೆ ಶಂಕಿಸಲಾಗಿದೆ. ಬೆಳ್ಳಾರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

kadabatimes.in