ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಚಾಮೇತಮೂಲೆ ಎಂಬಲ್ಲಿ ಗುರುವಾರ ಮುಂಜಾನೆ ಸಂಭವಿಸಿದ್ದು ಅಂಬೇಡ್ಕರ್ ಎಂಬವರ ಪತ್ನಿ ಸೀತಾ (47) ಆತ್ಮಹತ್ಯೆ ಮಾಡಿಕೊಂಡವರು.
ಕ್ಯಾನ್ಸರ್ ಪೀಡಿತೆಯಾಗಿದ್ದ ಇವರು ನಿರಂತರ ಚಿಕಿತ್ಸೆ ಪಡೆದರೂ ಗುಣಮುಖರಾಗದೆ ಇದ್ದ ಬಗ್ಗೆ ಮನ ನೊಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೈದಿರುತ್ತಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.