25.2 C
Kadaba
Saturday, March 15, 2025

ಹೊಸ ಸುದ್ದಿಗಳು

ಕಡಬ- ಪಂಜ ರಸ್ತೆ ಡಾಮರೀಕರಣ ಪ್ರಕ್ರಿಯೆ ತ್ವರಿತ ಕ್ರಮಕ್ಕೆ ಲೋಕೋಪಯೋಗಿ ಸಚಿವರ ಸೂಚನೆ

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ಸ್, ಕಡಬ:  ಕಡಬ- ಪಂಜ ಪ್ರಮುಖ ಜಿಲ್ಲಾ ರಸ್ತೆಯಲ್ಲಿ ಮರಣ ಗುಂಡಿಗಳು ಸೃಷ್ಟಿಯಾಗಿ ವಾಹನ ಸವಾರರು ನಿತ್ಯ ಪರದಾಟ ಮಾಡುತ್ತಿದ್ದಾರೆ .  ರಸ್ತೆಯ ಗುಂಡಿಗಳಿಗೆ ಡಾಮಾರು ಹಾಕಿ ತೇಪೆ ಹಾಕುವ ಕಾರ್ಯಕ್ಕೆ ಮುಂದಾದ ವೇಳೆ ಗಿ ಸ್ಥಳದಲ್ಲಿ ಬರೇ ಕಾರ್ಮಿಕರು ಅರೆ ಬರೆ ಕೆಲಸ ಮಾಡುತ್ತಿರುವುದಾಗಿ ಆರೋಪಿಸಿ ಆ ಭಾಗದ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಹಿನ್ನೆಲೆ ಕೆಲಸ ಸ್ಥಗಿತವಾಗಿತ್ತು .

kadabatimes.in

ಇದೀಗ ಕಡಬ-ಪಂಜ ರಸ್ತೆಯ ಮರುಡಾಮರೀಕರಣದ ಪ್ರಕ್ರಿಯೆ ತ್ವರಿತವಾಗಿ ಮಾಡುವಂತೆ ಲೋಕೋಪಯೋಗಿ ಸಚಿವ  ಸತೀಶ ಜಾರಕಿಹೊಳಿ ಅವರು ಇಂಜಿನಿಯರ್ಸ್ ಗಳಿಗೆ ಸೂಚನೆ ನೀಡಿದ್ದಾರೆ. ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ಸಚಿವರನ್ನು ಭೇಟಿಯಾದ ಮಾಜಿ ಜಿ.ಪಂ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಅವರು   ಕಡಬ- ಕೋಡಿಂಬಾಳ ಪಂಜ ರಸ್ತೆಯು ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿದ್ದರೂ ಹಲವಾರು ವರ್ಷಗಳಿಂದ ಡಾಮರೀಕರಣವಾಗದೇ ರಸ್ತೆಗಳು ಗುಂಡಿ ಬಿದ್ದಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿರುವುದರಿಂದ ತಕ್ಷಣ 1 ಕೋಟಿ ಅನುದಾನ ನೀಡಿ ಡಾಮರೀಕರಣ ಗೊಳಿಸಿ  ಉಪಯೋಗಗೊಳಿಸುವಂತೆ  ಮನವಿ ನೀಡಿದ್ದರು.

kadabatimes.in
kadabatimes.in

ಈ ಸಂದರ್ಭದಲ್ಲಿ ಅಧಿಕಾರಿಗಳು ಈಗಾಗಲೇ ಈ ರಸ್ತೆಗೆ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಪ್ರಕ್ರಿಯೆಯಲ್ಲಿದೆ ಎಂದು ಮಾಹಿತಿ ನೀಡಿದರು . ಈ ವೇಳೆ ಸಚಿವರು ಕಾಮಗಾರಿ ವಿಳಂಬ ಆಗಿರುವ ಬಗ್ಗೆ ಚರ್ಚಿಸಿ  ರಸ್ತೆ ಡಾಮರೀಕರಣ ಪ್ರಕ್ರಿಯೆ ತ್ವರಿತವಾಗಿ  ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

kadabatimes.in

ಈ ಬಗ್ಗೆ ಕಡಬ ಟೈಮ್ಸ್ ಗೆ ಪ್ರತಿಕ್ರಿಯೆ ನೀಡಿದ  ಲೋಕೋಪಯೋಗಿ ಇಲಾಖೆ ಸುಳ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗೋಪಾಲ್ ಅವರು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ, ಶೀಘ್ರದಲ್ಲಿ ಕೆಲಸ ಆರಂಭಿಸಲಾಗುವುದು ಎಂದಿದ್ದಾರೆ.