23.5 C
Kadaba
Saturday, March 15, 2025

ಹೊಸ ಸುದ್ದಿಗಳು

ಕಡಬ:ಆಶಾಕಾರ್ಯಕರ್ತೆಗೆ ಬೆದರಿಕೆ:ನ್ಯಾಯಾಲಯದ ಆದೇಶದಂತೆ ಮೂವರ ವಿರುದ್ದ FIR ದಾಖಲು

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್, ಪ್ರಮುಖ ಸುದ್ದಿ: ಆಶಾಕಾರ್ಯಕರ್ತೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಮಾನ್ಯ ನ್ಯಾಯಾಲಯದ ಆದೇಶದಂತೆ ಪೊಲೀಸರು ಮೂವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

kadabatimes.in

2024ರ ಅಕ್ಟೋಬರ್ 21  ರಂದು ಆಶಾಕಾರ್ಯಕರ್ತೆಯಾಗಿರುವ  ಶ್ರೀ ಮತಿ ರಾಜೀವಿ ಎಂಬವರು ತನಗೆ ಆಗಿರುವ ತೊಂದರೆ ಬಗ್ಗೆ   ಠಾಣೆಗೆ ದೂರು ನೀಡಿದ್ದರು. ಆದರೆ ಪೊಲೀಸರು  ಅಸಂಜ್ಞೆಯ ಪ್ರಕರಣವೆಂದು ಪರಿಗಣಿಸಿ  ದೂರು ಸ್ವೀಕರಿಸಿ  ಹಿಂಬರಹ ನೀಡಿದ್ದರು.

kadabatimes.in
kadabatimes.in
kadabatimes.in

ಇದೀಗ ದೂರನ್ನು ದಾಖಲಿಸಿಕೊಂಡು ತನಿಖೆ ಮಾದುವಂತೆ ಪುತ್ತೂರು ಜೆ.ಎಂಎಫ್.ಸಿ ಮತ್ತು2 ನೇ ಎಸಿಜೆ ನ್ಯಾಯಾಲಯವು ಆದೇಶ ಮಾಡಿದೆ. ಅಮಲು ಸೇವಿಸಿ ಅವಾಚ್ಯ ಶಬ್ದಗಳಿಂದ ಬೈದು ನೀವು ಇಲ್ಲಿಂದ ಜಾಗ ಬಿಟ್ಟು ಹೋಗಬೇಕು, ಇಲ್ಲದಿದ್ದರೆ ನಿಮ್ಮನ್ನು ಮುಗಿಸುತ್ತೆವೆ ಎಂದು ಬೆದರಿಕೆ ಹಾಕಿದ ಆರೋಪದ ಮೇರೆಗೆ  ಕುಟ್ರುಪ್ಪಾಡಿಯ ಉಳಿಪ್ಪು ನಿವಾಸಿಗಳಾದ ಜಿನ್ನಪ್ಪ ಗೌಡ, ಚಂದ್ರಶೇಖರ ಗೌಡ, ಅಚ್ಚುತ್ತ ಗೌಡ ಅವರುಗಳ ವಿರುದ್ದ ಪ್ರಕರಣ ದಾಖಲಾಗಿದೆ.