27.2 C
Kadaba
Friday, March 14, 2025

ಹೊಸ ಸುದ್ದಿಗಳು

ದಾರಿ ಕೇಳುವ ನೆಪದಲ್ಲಿ ವೃದ್ದನ ಕೈ ಬೆರಳಲ್ಲಿದ್ದ ಚಿನ್ನದ ಉಂಗುರ ದೋಚಿ ಪರಾರಿ

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಪುತ್ತೂರು: ಬೈಕ್‌ನಲ್ಲಿ ಬಂದ ವ್ಯಕ್ತಿಯೋರ್ವ ದಾರಿ ಕೇಳುವ ನೆಪದಲ್ಲಿ ಮನೆಯಂಗಳದಲ್ಲಿದ್ದ ವೃದ್ಧರೊಬ್ಬರ ಕೈಬೆರಳಲ್ಲಿದ್ದ ಚಿನ್ನದ ಉಂಗುರ ದೋಚಿ ಪರಾರಿಯಾದ ಘಟನೆ ಮಾ.11ರ ತಡರಾತ್ರಿ ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ರಾಗಿದಕುಮೇರು (ಬಡಕಾಯ್ದೆ) ಎಂಬಲ್ಲಿ ನಡೆದಿದೆ.

kadabatimes.in

ಚಿಕ್ಕಮುಡ್ನೂರು ಗ್ರಾಮದ ರಾಗಿದಕುಮೇರು(ಬಡಕಾಯ್ದೆ) ಸತೀಶ್ ರೈ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಅವರ ಸಂಬಂಧಿಕರೊಬ್ಬರು ತಡ ರಾತ್ರಿ ಸಿಟೌಟ್‌ನಲ್ಲಿ ಕುಳಿತ್ತಿದ್ದ ಸಂದರ್ಭ, ಬೈಕ್‌ನಲ್ಲಿ ಬಂದ ಹೆಲ್ಮೆಟ್ ಧರಿಸಿದ್ದ ವ್ಯಕ್ತಿಯೊಬ್ಬರು ಆನಡ್ಕಕ್ಕೆ ಹೋಗುವ ದಾರಿ ಯಾವುದೆಂದು ಕೇಳಿ ವೃದ್ದರನ್ನು ಅಂಗಳಕ್ಕೆ ಕರೆಸಿ ಅವರ ಕೈ ಬೆರಳಲ್ಲಿದ್ದ ಚಿನ್ನದ ಉಂಗುರವನ್ನು ದೋಚಿ ಪರಾರಿಯಾಗಿದ್ದಾರೆ.

kadabatimes.in
kadabatimes.in

ಚಡ್ಡಿ ಹಾಕಿಕೊಂಡಿದ್ದ ವ್ಯಕ್ತಿ ತುಳುವಿನಲ್ಲೇ ದಾರಿಯನ್ನು ಕೇಳಿದ್ದಾರೆ ಎಂದು ಮನೆ ಮಂದಿ ತಿಳಿಸಿದ್ದಾರೆ. ತಡ ರಾತ್ರಿ ಪುತ್ತೂರು ಪೊಲೀಸರು ಮನೆಗೆ ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆಂದು ತಿಳಿದು ಬಂದಿದೆ.

kadabatimes.in