39.9 C
Kadaba
Tuesday, March 18, 2025

ಹೊಸ ಸುದ್ದಿಗಳು

ನಮ್ಮ ಕಡಬಕ್ಕೆ ಹೆಮ್ಮೆ: ರಾಷ್ಟ್ರ ಮಟ್ಟದ  ‘ಶಿಕ್ಷಣ ಸೌರಭ’ಪ್ರಶಸ್ತಿಗೆ ಓಂತ್ರಡ್ಕ ಶಾಲಾ ಶಿಕ್ಷಕ ಆಯ್ಕೆ

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್(KADABA TIMES):ತಾಲೂಕಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಓಂತ್ರಡ್ಕದಲ್ಲಿ ಆಂಗ್ಲ ಭಾಷ ಪದವೀಧರ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ದಿಲೀಪ್ ಕುಮಾರ್ ಸಂಪಡ್ಕ ಅವರು  ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ (ರಿ) ನೀಡುವ ರಾಷ್ಟ್ರೀಯ  ಶಿಕ್ಷಣ ಸೌರಭ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

kadabatimes.in

ಶೈಕ್ಷಣಿಕ ಚಿಂತಕ, ಅಂಕಣಕಾರ, ಕಥೆಗಾರರಾಗಿ ಗುರುತಿಸಿಕೊಂಡಿರುವ ದೀಲಿಪ್ ಕುಮಾರ್ ಅವರ  ಶಿಕ್ಷಣ, ಸಂಘಟನೆ ಹಾಗೂ ಸಮಾಜ ಸೇವೆಯನ್ನು ಪರಿಗಣಿಸಿ ಭಾನುವಾರ ಶಿವಮೊಗ್ಗದ ಕರ್ನಾಟಕ ಸಂಘದ ಸಭಾಭವನದಲ್ಲಿ ನಡೆದ ರಾಷ್ಟ್ರ ಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ  ಬರಹಗಾರರ ಸಂಘ ಹೂವಿನ ಹಡಗಲಿ (ರಿ) ಅಧ್ಯಕ್ಷ  ಮುಧುನಾಯ್ಕ ಲಂಬಾಣಿ ಇವರ ಸಮ್ಮುಖದಲ್ಲಿ ರಾಷ್ಟ್ರ ಮಟ್ಟದ ಶಿಕ್ಷಣ ಸೌರಭ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.

kadabatimes.in
kadabatimes.in

ಓಂತ್ರಡ್ಕ ಶಾಲೆಯಲ್ಲಿ ಕಳೆದ ಒಂಭತ್ತು ವರ್ಷಗಳಿಂದ ಪದವೀಧರ ಪ್ರಾಥಮಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ಈ ಹಿಂದೆ  ಬೆಂಗಳೂರಿನ ಪ್ರತಿಷ್ಠಿತ ಸಿ.ಬಿ.ಎಸ್.ಸಿ ಶಾಲೆಗಳಲ್ಲಿ ಶೈಕ್ಷಣಿಕ ಕೋ-ಆರ್ಡಿನೇಟರ್, ಪ್ರಾಂಶುಪಾಲರಾಗಿ ಸಹ ಕಾರ್ಯನಿರ್ವಹಿಸಿರುತ್ತಾರೆ.  ಶಿಕ್ಷಣ ಇಲಾಖೆಯಲ್ಲಿ ಹಲವು ತರಬೇತಿಗಳಿಗೆ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಶಿಕ್ಷಕರಿಗೆ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದಾರೆ.  ಇವರ ಹಲವು ಲೇಖನಗಳು ರಾಜ್ಯದ ಹಲವು ಪತ್ರಿಕೆಗಳಲ್ಲಿ,ರಾಷ್ಟ್ರೀಯ  ಮತ್ತು ಅಂತರಾಷ್ಷೀಯ ನಿಯತಕಾಲಿಕೆಗಳಲ್ಲಿ ಕೂಡ ಪ್ರಕಟಗೊಂಡಿದೆ.

kadabatimes.in

ಇವರು ರಂಗಭೂಮಿ ಕಲಾವಿದರಾಗಿ, ಹಲವಾರು ರಂಗಪ್ರದರ್ಶನಗಳಲ್ಲಿ ಸಹ ಹೆಸರು ಮಾಡಿದ್ದಾರೆ. ವಿವಿಧ ಶಿಕ್ಷಕ ಸಂಘಟನೆಗಳ ಮೂಲಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

You cannot copy content of this page