23.9 C
Kadaba
Sunday, March 23, 2025

ಹೊಸ ಸುದ್ದಿಗಳು

ಧರ್ಮಸ್ಥಳ ಠಾಣಾ ವ್ಯಾಪ್ತಿ: ಕಾಡಿನ ರಸ್ತೆ ಬದಿಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋದ ದುರುಳರು

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ಸ್ (KADABA TIMES): ಇಲ್ಲಿಯ ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡೋಳುಕೆರೆ ಎಂಬಲ್ಲಿ ಕಾಡಿನ ಮಧ್ಯೆ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಬಿಟ್ಟುಹೋದ ಘಟನೆ ಇಂದು (ಮಾರ್ಚ್ 22) ಬೆಳಗ್ಗೆ ಬೆಳಕಿಗೆ ಬಂದಿದೆ.

kadabatimes.in

ಮಗುವಿನ ಅಳುವ ಶಬ್ಧ ಕೇಳಿ ಸಾರ್ವಜನಿಕರು ಹೋದಾಗ ಕಾಡಿನಲ್ಲಿ ಮಗು ಪತ್ತೆಯಾಗಿದೆ.ಬೆಳಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡ್ರೊಟ್ಟು ರಸ್ತೆಯ ಕೊಡೋಳುಕೆರೆ ಬಳಿ ಸುತ್ತಮುತ್ತಲಿನ ನಿವಾಸಿಗಳಿಗೂ ದಾರಿಹೋಕ ಮಹಿಳೆಯೊಬ್ಬಳಿಗೂ ಮಗುವಿನ ಅಳುವ ಶಬ್ಧ ಕೇಳಿ, ತಕ್ಷಣವೇ ಬೆಳಾಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿದ್ಯಾ ಅವರಿಗೆ ಮಾಹಿತಿ ನೀಡಲಾಯಿತು.

kadabatimes.in
kadabatimes.in

ವಿಷಯ ತಿಳಿದ ವಿದ್ಯಾ ಅವರು ಕೂಡಲೇ ಸ್ಥಳಕ್ಕೆ ಧಾವಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರು.ಧರ್ಮಸ್ಥಳ ಆರೋಗ್ಯಾಧಿಕಾರಿ ಮಂಜು ಅವರು ಕೂಡಲೇ ಮಗುವಿನ ಆರೋಗ್ಯ ತಪಾಸಣೆ ನಡೆಸಿದ್ದು, ಮಗು ಸಂಪೂರ್ಣ ಆರೋಗ್ಯವಾಗಿರುವುದಾಗಿ ದೃಢಪಡಿಸಿದ್ದಾರೆ. ಹೀಗಾಗಿ ಮಗುವನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಈ ಬಗ್ಗೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.

kadabatimes.in

ಮಗುವನ್ನು ಯಾರು ಬಿಟ್ಟುಹೋದರು? ಏಕೆ? ಎಂಬ ಪ್ರಶ್ನೆಗಳಿಗೆ ಉತ್ತರ ಹುಡುಕುವ ಪ್ರಯತ್ನ ಈಗ ನಡೆಯುತ್ತಿದೆ.ಕಾಡಿನಲ್ಲಿ ಮಗು ಪತ್ತೆಯಾಗಿರುವ ಈ ವಿಚಿತ್ರ ಘಟನೆಯು ಹಲವಾರು ಪ್ರಶ್ನೆಗಳನ್ನು ಹುಟ್ಟಿಸಿದೆ.