36.3 C
Kadaba
Friday, March 28, 2025

ಹೊಸ ಸುದ್ದಿಗಳು

ಜಾಗದ ತಕರಾರು ನ್ಯಾಯಾಲಯದಲ್ಲಿ ಇತ್ಯಾರ್ಥ:ಮತ್ತೆ ಕುಕ್ಕೆ ದೇಗುಲದ ಸುಪರ್ದಿಗೆ

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಪೇಕ್ಷಾರ್ಹ, ಅಥವಾ ತಪ್ಪು ಮಾಹಿತಿಗಳು ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್( KADABA TIMES): ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗವೊಂದು ನ್ಯಾಯಾಲಯದ ಮೂಲಕ‌ ಮತ್ತೆ ದೇವಾಲಯದ ಸುಪರ್ದಿಗೆ ಬಂದಿದೆ.

kadabatimes.in

ಇದೀಗ ಆ ಜಾಗದಲ್ಲಿದ್ದ  ಅದರಲ್ಲಿದ್ದ ಕಟ್ಟಡದ ತೆರವು ಕಾರ್ಯವು ಈ ದೇವಾಲಯದ ಅಧಿಕಾರಿಗಳು, ಸಿಬ್ಬಂದಿಗಳು ಭದ್ರತಾ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ನಡೆದಿದೆ.

kadabatimes.in
kadabatimes.in

ಸುಬ್ರಹ್ಮಣ್ಯದ ಕಾಶಿಕಟ್ಟೆ ರಥಬೀದಿಯ ಮಧ್ಯೆ ಅಂಚೆ ಕಚೇರಿ ಮುಂಭಾಗದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಾಗೂ ಕುಂಞಕ್ಕ ಎಂಬವರಿಗೆ ಜಾಗದ ತಕರಾರು ಇತ್ತು. ಅದಕ್ಕೆ ಸಂಬಂಧಿಸಿದ ತಕರಾರು ನ್ಯಾಯಾಲಯದಲ್ಲಿದ್ದು, ಈ ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದು, ಜಾಗವು ದೇವಸ್ಥಾನಕ್ಕೆ ಸಂಬಂಧಿಸಿದ ಜಾಗವೆಂದು ಆದೇಶವಾಗಿತ್ತು.

kadabatimes.in

ಇದರನ್ವಯ ಸುಳ್ಯ ನ್ಯಾಯಲಯದ ಆದೇಶಿಕ ಜ್ಯಾರಿಕಾರರು(ಅಮೀನ್‌) ಹಾಗೂ ನ್ಯಾಯಾಲಯದ ಸಿಬಂದಿ ಖುದ್ದಾಗಿ ಹಾಜರಿದ್ದರು. ಈ ಸ್ಥಳವನ್ನು ಇದೀಗ  ದೇವಾಲಯಕ್ಕೆ ಹಸ್ತಾಂತರಿಸಲಾಗಿದೆ.

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.