25.5 C
Kadaba
Monday, March 31, 2025

ಹೊಸ ಸುದ್ದಿಗಳು

ಸ್ವತ: ಅಧಿಕಾರಿಗಳೇ ಕುಮಾರಧಾರ ನದಿಗೆ ಇಳಿದು ತ್ಯಾಜ್ಯ ಸಂಗ್ರಹಿಸಿದರು

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಪೇಕ್ಷಾರ್ಹ, ಅಥವಾ ತಪ್ಪು ಮಾಹಿತಿಗಳು ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ (KADABA TIMES): ಪುಣ್ಯ ಕ್ಷೇತ್ರಗಳ ಬಳಿ ಇರುವ ನದಿಗಳು ತ್ಯಾಜ್ಯಗಳಿಂದ ಆವೃತವಾಗುತ್ತಿದ್ದು ಸ್ಥಳೀಯಾಡಳಿತ ಮತ್ತು ಆಡಳಿತ ಮಂಡಳಿಗೆ ನಿಭಾಯಿಸುವುದೇ ಸವಾಲಿನ ಕೆಲಸವಾಗಿದೆ.

kadabatimes.in

ಕ್ಷೇತ್ರಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಲ್ಲಿ ತ್ಯಾಜ್ಯ ಎಸೆಯದಂತೆ ಸೂಚನೆ, ಎಚ್ಚರಿಕೆ,ತಿಳುವಳಿಕೆ ನೀಡಿದರೂ ಕ್ಯಾರೇ ಎನ್ನದಂತಹ  ಸ್ಥಿತಿ ನಿರ್ಮಾಣವಾಗಿದೆ. ಸಾಮಾನ್ಯವಾಗಿ ಯಾವುದಾದರೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸ್ವಚ್ಚತೆ ಮಾಡಿ ಗಮನ ಸೆಳೆದಿದ್ದರು.

kadabatimes.in

ಇದೀಗ ಮಾ.26ರಂದು  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಧಿಕಾರಿಗಳೇ ನದಿಗಿಳಿದು  ತ್ಯಾಜ್ಯಗಳನ್ನು  ಸಂಗ್ರಹಿಸಿ  ಭಕ್ತ ಸಮೂಹಕ್ಕೆ ಸ್ವಚ್ಛತೆಯ ಪ್ರಜ್ಞೆ ಮೂಡಿಸಿದ್ದಾರೆ.

kadabatimes.in

ಕುಕ್ಕೆ ಸುಬ್ರಹ್ಮಣ್ಯ  ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ,  ಸಹಾಯಕ ಕಾರ್ಯನಿರ್ವಹಣಾಧಿಕಾರಿ ಏಸುರಾಜ್ ಸೇರಿದಂತೆ ದೇಗುಲದ ಅಧಿಕಾರಿವರ್ಗ ಮತ್ತು150ಕ್ಕೂ ಹೆಚ್ಚು ಸಿಬ್ಬಂದಿಗಳು  ಕುಮಾರಧಾರ ನದಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು

ತ್ಯಾಜ್ಯ ರಾಶಿಯನ್ನು  ಸ್ಥಳೀಯ  ಗ್ರಾಮ ಪಂಚಾಯಿತ್ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ರವಾನಿಸಲಾಗಿದೆ

kadabatimes.in

ದೇಗುಲದ  ನೌಕರರು ನೀರಿನಿಂದ ಎಷ್ಟೇ ತ್ಯಾಜ್ಯಗಳನ್ನು ಹೊರತೆಗೆದರೂ  ಭಕ್ತಾದಿಗಳು ನೀರಲ್ಲೇ ಬಟ್ಟೆಗಳನ್ನು ಎಸೆಯುವ ಚಾಳಿ  ಮುಂದುವರಿಸುತ್ತಿರುವುದು  ನೋವಿನ ವಿಚಾರ. ಇದಕ್ಕೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳ ಮೂಲಕವೇ ನಿಯಂತ್ರಿಸುವುದು ಅನಿವಾರ್ಯವಾಗಿದೆ   ಎನ್ನುತ್ತಾರೆ ಸಾರ್ವಜನಿಕರು.

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.