25.3 C
Kadaba
Thursday, April 10, 2025

ಹೊಸ ಸುದ್ದಿಗಳು

Court Order |ಸೌಜನ್ಯ ಪ್ರಕರಣ: ಏಪ್ರಿಲ್ 6ರ ಹಕ್ಕೊತ್ತಾಯ ಸಭೆಗೆ ಹೈಕೋರ್ಟ್ ಮಧ್ಯಂತರ ತಡೆ

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಪೇಕ್ಷಾರ್ಹ, ಅಥವಾ ತಪ್ಪು ಮಾಹಿತಿಗಳು ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ಸ್ (KADABA TIMES):  ಸೌಜನ್ಯ ಸಾವಿಗೆ ನ್ಯಾಯ ದೊರಕಿಸುವ ನೆಪದಲ್ಲಿ ಇದೇ 6ರಂದು ಧರ್ಮಸ್ಥಳಕ್ಕೆ ನುಗ್ಗುವ ಮತ್ತು ದಾಂದಲೆ ಎಬ್ಬಿಸುವ ದುರುದ್ದೇಶದಿಂದ ಹಮ್ಮಿಕೊಂಡಿರುವ ಬೆಳ್ತಂಗಡಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದವರೆಗಿನ ಪ್ರತಿಭಟನಾ ರ‍್ಯಾಲಿಯನ್ನು ತಡೆಯಬೇಕು’ ಎಂಬ ಮನವಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್‌ ಉದ್ದೇಶಿತ  ಮಧ್ಯಂತರ ತಡೆ ನೀಡಿದೆ.

kadabatimes.in

ಪ್ರತಿಭಟನೆ ನಿರ್ಬಂಧಿಸುವಂತೆ ಕೋರಿ, ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆ’ಯ ಕಾರ್ಯದರ್ಶಿ ಧನಕೀರ್ತಿ ಅರಿಗ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

kadabatimes.in

ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಉದಯ ಹೊಳ್ಳ ಅವರ ವಾದ ಆಲಿಸಿದ ನ್ಯಾಯಪೀಠ, ‘ಅಪರಾಧ ಮನೋಭಾವದ ವ್ಯಕ್ತಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ವಿಚಾರಗಳಿಗೆ ಸಂಬಂಧಿಸಿದ ಪ್ರತಿಭಟನೆಗಳ ಕುರಿತಂತೆ ಇದೇ ಹೈಕೋರ್ಟ್‌ನ ಸಮನ್ವಯ ನ್ಯಾಯಪೀಠ ನೀಡಿರುವ ಆದೇಶವನ್ನು ಉಲ್ಲಂಘಿಸುವ ಇರಾದೆ ಹೊಂದಿರುವುದು ಅರ್ಜಿಯ ಜೊತೆಗೆ ಲಗತ್ತಿಸಲಾಗಿರುವ ವಾಟ್ಸ್‌ ಆ್ಯಪ್‌ ಸಂದೇಶಗಳನ್ನು ಗಮನಿಸಿದರೆ ನಿಸ್ಸಂಶಯವಾಗಿಯೂ ವೇದ್ಯವಾಗುವ ಅಂಶ’ ಎಂದು ಸ್ಪಷ್ಟಪಡಿಸಿದೆ.

kadabatimes.in

ಪ್ರತಿವಾದಿ ಕುಸುಮಾವತಿ ಮತ್ತು ನೇಟಿವ್‌ ಎಂಪವರ್‌ಮೆಂಟ್‌ ಅಂಡ್‌ ಎಕ್ವಿಪ್ಪಿಂಗ್‌ ಟೀಮ್‌ ಫಾರ್‌ ಹೋಪ್‌ ಅಂಡ್‌ ಇಂಟರಾಕ್ಷ್ಯನ್‌ (ನೀತಿ) ಟ್ರಸ್ಟ್‌ನ ಏಜೆಂಟರು, ಅನುಯಾಯಿಗಳು, ಸೇವಕರು ಅಥವಾ ಸಂಬಂಧಿಸಿದ ವ್ಯಕ್ತಿಗಳು ಪ್ರತಿಭಟನೆಯ ಹೆಸರಿನಲ್ಲಿ ಧರ್ಮಸ್ಥಳಕ್ಕೆ ನುಗ್ಗುವ ಮತ್ತು ಅಲ್ಲಿನ ಶಾಂತಿ ಕದಡುವ ಉದ್ದೇಶದಲ್ಲಿರುವುದು ಸ್ಪಷ್ಟವಾಗುತ್ತದೆ. ಆದ್ದರಿಂದ, ರ‍್ಯಾಲಿಗೆ ಮಧ್ಯಂತರ ತಡೆ ನೀಡಲಾಗುತ್ತಿದೆ’ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.

kadabatimes.in

ಆಯೋಜಕರ ಪ್ರಕಟಣೆ  ಏನು? : 12 ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ಕು.ಸೌಜನ್ಯ ಅವರ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಕೂಡಲೇ ಅಕ್ವಿಟಲ್ ಕಮಿಟಿ ರಚಿಸಬೇಕು ಎಂದು ಆಗ್ರಹಿಸಿ ಏ.೬ರಂದು ಬೆಳಿಗ್ಗೆ ಧರ್ಮಸ್ಥಳ ಗ್ರಾಮದ ಮಣ್ಣಸಂಕದಿಂದ ಬೃಹತ್ ಜಾಥಾ ನಡೆದು ಬಳಿಕ ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ ನಡೆಸಲು ನಿರ್ಧಾರವಾಗಿತ್ತು.  ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಅಕ್ವಿಟಲ್ ಕಮಿಟಿ ರಚಿಸಲು ರಾಜ್ಯ ಸರಕಾರಕ್ಕೆ ನ್ಯಾಯಾಲಯ ಎರಡೆರಡು ಬಾರಿ ಆದೇಶ ನೀಡಿದ್ದರೂ ರಾಜ್ಯ ಸರಕಾರ ಇಲ್ಲಿಯವರೆಗೂ ಅಕ್ವಿಟಲ್ ಕಮಿಟಿ ರಚಿಸದೆ ಸೌಜನ್ಯಾಳಿಗೆ ಅನ್ಯಾಯ ಮಾಡುತ್ತಿದೆ.ಇದರ ವಿರುದ್ಧ ಏ.೬ರಂದು ಪೂರ್ವಾಹ್ನ 10 ಗಂಟೆಗೆ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸಮೀಪ, ಮೃತದೇಹ ಸಿಕ್ಕಿದ ಮಣ್ಣಸಂಕದಿಂದ ಬೃಹತ್ ಜಾಥಾ ಪ್ರಾರಂಭಗೊಂಡು ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ನೇತೃತ್ವದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ ನಡೆಯಲಿದೆ.ತಕ್ಷಣ ಅಕ್ವಿಟಲ್ ಕಮಿಟಿ ರಚಿಸಿ, ಸೌಜನ್ಯಾಳಿಗೆ ಮೋಸ ಮಾಡಿದ ಪೊಲೀಸರು ಮತ್ತು ವೈದ್ಯಾಧಿಕಾರಿಗಳನ್ನು ತನಿಖೆ ನಡೆಸಲು ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಭೆ ನಡೆಯಲಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದರು

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.