40.1 C
Kadaba
Wednesday, April 9, 2025

ಹೊಸ ಸುದ್ದಿಗಳು

ಸುಬ್ರಹ್ಮಣ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ ಗಂಭೀರ , ಮಗ ಸಾವು

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಪೇಕ್ಷಾರ್ಹ, ಅಥವಾ ತಪ್ಪು ಮಾಹಿತಿಗಳು ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ಸ್, ( Kadaba times) ಸುಬ್ರಹ್ಮಣ್ಯ: ಜೊತೆಯಾಗಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ತಾಯಿ ಮತ್ತು ಮಗ ಯತ್ನಿಸಿದ್ದು ಮಗ ಸಾವನ್ನಪ್ಪಿ ತಾಯಿ ಗಂಭೀರ ಸ್ಥಿತಿಯಲ್ಲಿ ಸ ಆಸ್ಪತ್ರೆಗೆ ದಾಖಲಾದ ಘಟನೆ ಸುಬ್ರಹ್ಮಣ್ಯ ದಿಂದ ವರದಿಯಾಗಿದೆ.

kadabatimes.in

ಸುಬ್ರಹ್ಮಣ್ಯ ಸಮೀಪದ  ನಾಲ್ಕೂರು ಗ್ರಾಮದ ದೇರಪ್ಪಜ್ಜ ನಮನೆ ನಿವಾಸಿ ಕುಶಾಲಪ್ಪ‌ ಗೌಡ ಎಂಬವರ ಮಗ ನಿತಿನ್ (32 ವ.) ಮೃತ ಯುವಕ.  ತಾಯಿ ಸುಲೋಚನಾ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

kadabatimes.in
kadabatimes.in

ತಾಯಿ-ಮಗ  ಇಬ್ಬರೂ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದರು ಎನ್ನಲಾಗಿದೆ.ಮೃತ ನಿತಿನ್ ಐಟಿಐ ವಿದ್ಯಾಭ್ಯಾಸ ಹೊಂದಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ದೀಕ್ಷಾ ಎಂಬವರನ್ನು ವಿವಾಹವಾಗಿದ್ದರು. ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ವಿಷ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ.

kadabatimes.in

.ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.