ಕಡಬ ಟೈಮ್ಸ್, ( Kadaba times) ಸುಬ್ರಹ್ಮಣ್ಯ: ಜೊತೆಯಾಗಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ತಾಯಿ ಮತ್ತು ಮಗ ಯತ್ನಿಸಿದ್ದು ಮಗ ಸಾವನ್ನಪ್ಪಿ ತಾಯಿ ಗಂಭೀರ ಸ್ಥಿತಿಯಲ್ಲಿ ಸ ಆಸ್ಪತ್ರೆಗೆ ದಾಖಲಾದ ಘಟನೆ ಸುಬ್ರಹ್ಮಣ್ಯ ದಿಂದ ವರದಿಯಾಗಿದೆ.


ಸುಬ್ರಹ್ಮಣ್ಯ ಸಮೀಪದ ನಾಲ್ಕೂರು ಗ್ರಾಮದ ದೇರಪ್ಪಜ್ಜ ನಮನೆ ನಿವಾಸಿ ಕುಶಾಲಪ್ಪ ಗೌಡ ಎಂಬವರ ಮಗ ನಿತಿನ್ (32 ವ.) ಮೃತ ಯುವಕ. ತಾಯಿ ಸುಲೋಚನಾ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.




ತಾಯಿ-ಮಗ ಇಬ್ಬರೂ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದರು ಎನ್ನಲಾಗಿದೆ.ಮೃತ ನಿತಿನ್ ಐಟಿಐ ವಿದ್ಯಾಭ್ಯಾಸ ಹೊಂದಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ದೀಕ್ಷಾ ಎಂಬವರನ್ನು ವಿವಾಹವಾಗಿದ್ದರು. ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ವಿಷ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ.


.ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.