34.1 C
Kadaba
Saturday, March 15, 2025

ಹೊಸ ಸುದ್ದಿಗಳು

ಕಡಬ ಠಾಣಾ ವ್ಯಾಪ್ತಿ : ಆಲಂಕಾರಿನ ಸರ್ಕಾರಿ ಶಾಲೆಯಲ್ಲಿ ಹೂವಿನ ಚಟ್ಟಿ,ಗಿಡ ಹಾಳು ಮಾಡಿ,ನೀರಿನ ಟ್ಯಾಪ್ ಮುರಿದು,ನೋಟಿಸ್ ಬೋರ್ಡ್ ಗೆ ಗೋಣಿ ಚೀಲ ತಳ್ಳಿ ವಿಕೃತಿ

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ಸ್, ಆಲಂಕಾರು: ಕಡಬ ಠಾಣಾ ವ್ಯಾಪ್ತಿಯ ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೂವಿನ ಚಟ್ಟಿ ಹಾಗೂ ಇತರೇ ಸೊತ್ತುಗಳನ್ನು ವಿದ್ಯಾರ್ಥಿಗಳೇ ಪುಡಿಗೈದು ವಿಕೃತಿ ಮೆರೆದ ಘಟನೆ ಫೆ.26ರ ಮಹಾ ಶಿವರಾತ್ರಿಯಂದು ಹಗಲು ವೇಳೆಯಲ್ಲೇ ನಡೆದಿದೆ.

kadabatimes.in

ಶಾಲೆಯ ಹೂವಿನ ಚಟ್ಟಿ, ಹೂವಿನ ಗಿಡ, ವಾಲಿಬಾಲ್ ನೆಟ್ ಹಾಳು ಗೆಡವಲಾಗಿದೆ. ಕಸದ ತೊಟ್ಟಿಯಲ್ಲಿದ್ದ ಕಸವನ್ನು ಚೆಲ್ಲಿ, ಪಪ್ಪಾಯ ಗಿಡವನ್ನು ಮುರಿದು ಹಾಕಲಾಗಿದೆ. ಶಾಲಾ ನೋಟೀಸ್ ಬೋರ್ಡ್‌ಗೆ ಗೋಣಿ ಚೀಲ ತಳ್ಳಲಾಗಿದೆ.

kadabatimes.in
kadabatimes.in

ಶಾಲೆಯ ಆವರಣದಲ್ಲಿನ ಬಾಳೆಗಿಡದಲ್ಲಿದ್ದ ಗೊನೆಯನ್ನು ಕಡಿದು ತಂದು ಶಾಲಾ ಆವರಣದಲ್ಲಿ ಹಾಕಿ, ಬಾಳೆಕಾಯಿಗಳನ್ನು ಚೆಲ್ಲಾಪಿಲ್ಲಿಯಾಗಿ ಹಾಕಲಾಗಿದೆ. ಶೌಚಾಲಯದ ಟ್ಯಾಪ್ ಸಹ ಮುರಿದು ಹಾಕಿದ್ದಾರೆ. ರಜಾ ದಿನವಾದರೂ ಶಾಲಾ ಮುಖ್ಯಶಿಕ್ಷಕರು ಮಧ್ಯಾಹ್ನದ ತನಕ ಶಾಲೆಯಲ್ಲಿದ್ದು ನಂತರ ಕಾರ್ಯ ನಿಮಿತ್ತ ಪುತ್ತೂರಿಗೆ ತೆರಳಿದ್ದರು.

kadabatimes.in

ಆ ಬಳಿಕ ಈ ಕೃತ್ಯ ನಡೆದಿದ್ದು ಇದನ್ನು ಗಮನಿಸಿದ ಸ್ಥಳೀಯರು ಮುಖ್ಯೋಪಾಧ್ಯಾಯರ ಮೊಬೈಲ್‌ಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಮುಖ್ಯೋಪಾಧ್ಯಾರು ಮತ್ತೆ ಶಾಲೆಗೆ ಬಂದಿದ್ದು ಈ ವೇಳೆ ಶಾಲೆಯ ಆವರಣದಲ್ಲಿದ್ದ ಸ್ಥಳೀಯ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದು ಅದೇ ಶಾಲೆಯ ವಿದ್ಯಾರ್ಥಿಯೊಬ್ಬ ಮುಖ್ಯಶಿಕ್ಷಕರ ಕೈಗೆ ಸಿಕ್ಕಿಬಿದ್ದಿದ್ದು ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕರು ಹಾಗೂ ಊರವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.