26 C
Kadaba
Monday, March 17, 2025

ಹೊಸ ಸುದ್ದಿಗಳು

ಸುಬ್ರಹ್ಮಣ್ಯ| ಮಗನ ಜೊತೆ ಮೀನು ಹಿಡಿಯಲು ಹೋದ ತಂದೆ ಹೊಳೆ ನೀರಲ್ಲಿ ಮುಳುಗಿ ಸಾವು

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ಸ್ (KADABA TIMES) : ಇಲ್ಲಿನ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ  ಐನೆಕಿದು ಗ್ರಾಮದಲ್ಲಿ ಮೀನು ಹಿಡಿಯಲೆಂದು ಹೊಳೆಗೆ ಇಳಿದ ವ್ಯಕ್ತಿ ನೀರಿನಲ್ಲಿ ಮೃತಪಟ್ಟ ಬಗ್ಗೆ ಮಾ.16 ರಂದು  ವರದಿಯಾಗಿದೆ.

kadabatimes.in

ಐನೆಕಿದು ಗ್ರಾಮದ ಗುಂಡಡ್ಕ ನಿವಾಸಿ ಜಗದೀಶ ಜಿ(45ವ) ಮೃತಪಟ್ಟವರು.

kadabatimes.in
kadabatimes.in

ತನ್ನ ಮಗನ ಜೊತೆ ಗುಂಡಡ್ಕ ಎಂಬಲ್ಲಿ ಹರಿಯುವ ಹರಿಹರ ಹೊಳೆಯಲ್ಲಿ  ಮೀನು ಹಿಡಿಯುವ ಬಲೆಯೊಂದಿಗೆ ನೀರಿಗೆ ಇಳಿದಿದ್ದು ಅಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವುದಾಗಿದೆ.

kadabatimes.in

ಮೃತರ ಮಗ ಕುಟುಂಬಸ್ಥರಿಗೆ ಮಾಹಿತಿ ನೀಡಿದ ಬಳಿಕ  ನೀರಿನಲ್ಲಿ ಹುಡುಕಾಡಿದ  ವೇಳೆ ಮೃತ ದೇಹವು ನೀರಿನ ಸುಳಿಯಲ್ಲಿ ಸಿಕ್ಕಿಕೊಂಡಿರುವುದು  ತಿಳಿದು ಬಂದಿದೆ. ಆಕಸ್ಮಿಕವಾಗಿ  ನೀರಿನಲ್ಲಿ  ಮುಳುಗಿ ಮೃತಪಟ್ಟಿರುವುದಾಗಿ ದೇವಿಪ್ರಸಾದ್ ಎಂಬವರು ನೀಡಿದ ದೂರಿನಂತೆ   ಸುಬ್ರಹ್ಮಣ್ಯ ಪೊಲೀಸ್ ಠಾಣಾ ಯುಡಿಆರ್ ನಂಬ್ರ: 08/2025 ಕಲಂ: 194 BNSS ಯಂತೆ ಪ್ರಕರಣ ದಾಖಲಾಗಿರುತ್ತದೆ.

You cannot copy content of this page