27.6 C
Kadaba
Friday, March 28, 2025

ಹೊಸ ಸುದ್ದಿಗಳು

ಕಡಬ: ದೇಣಿಗೆ ಸಂಗ್ರಹಿಸಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಗ್ರಾಮಸ್ಥರೇ ನಿರ್ಮಿಸಿದ ತಾತ್ಕಾಲಿಕ ರಸ್ತೆ ಸಂಚಾರ ಮುಕ್ತ

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಪೇಕ್ಷಾರ್ಹ, ಅಥವಾ ತಪ್ಪು ಮಾಹಿತಿಗಳು ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್, (KADABA TIMES): ಕಡಬ :ಕೋಡಿಂಬಾಳ ಮತ್ತು ಕೇನ್ಯ ಗ್ರಾಮಗಳ ನಡುವೆ ಹರಿಯುತ್ತಿರುವ ಕುಮಾರಧಾರಾ ನದಿಗೆ ಮಜ್ಜಾರು ಕಡವು ಎಂಬಲ್ಲಿ ಗ್ರಾಮಸ್ಥರೇ ಸೇರಿಕೊಂಡು ಶ್ರಮದಾನದ ಮೂಲಕ ನಿರ್ಮಿಸಿರುವ ತಾತ್ಕಾಲಿಕ ರಸ್ತೆ ಈಗ ಸಂಚಾರ ಮುಕ್ತವಾಗಿದೆ.

kadabatimes.in

ಮಾ. 23ರಂದು ಊರಿನ ಗಣ್ಯರು,ಗ್ರಾಮಸ್ಥರ ಮುಂದಾಳತ್ವದಲ್ಲಿ    ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ   ಅವರು ಈ  ಸೇತುವೆಯನ್ನು ಉದ್ಘಾಟನೆಯಾಗಿದೆ.ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಜೊತೆಗಿದ್ದರು.

kadabatimes.in

ಗ್ರಾಮಸ್ಥರೇ ಸೇರಿಕೊಂಡು ಕುಮಾರಧಾರಾ ನದಿಯ ಮಚ್ಚಾರುಕಡವು ಎಂಬಲ್ಲಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿಕೊಂಡಿದ್ದಾರೆ. ಈ  ತಾತ್ಕಾಲಿಕ ಸೇತುವೆ ನಿರ್ಮಾಣಕ್ಕಾಗಿ  ಸಮಿತಿಯನ್ನು ರಚಿಸಿ ಗ್ರಾಮಸ್ಥರ ಸಹಕಾರ ಪಡೆದು ದೇಣಿಗೆ ಸಂಗ್ರಹಿಸಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಕಲ್ಲು ಮಣ್ಣು ಮರಳು ಮತ್ತು ಸುಮಾರು 22 ಸಿಮೆಂಟ್ ಪೈಪು ಮುಂತಾದ ಪರಿಕರಗಳನ್ನು ಬಳಸಿ ಬೇಸಗೆಯಲ್ಲಿ ಮಾತ್ರ ಉಪಯೋಗಕ್ಕೆ ಬರುವ ಸುಮಾರು 200 ಮೀ. ಉದ್ದದ ತಾತ್ಕಾಲಿಕ ಸೇತುವೆ ನಿರ್ಮಿಸಿದ್ದಾರೆ .

kadabatimes.in

ಈ ಸಂಪರ್ಕ ಸೇತುವೆಯಿಂದಾಗಿ ಕೇನ್ಯ, ಬಳ್ಳ ಗ್ರಾಮಗಳ ಜನರಿಗೆ ತಾಲೂಕು ಕೇಂದ್ರ ಕಡಬ, ಕೋಡಿಂಬಾಳ ರೈಲು ನಿಲ್ದಾಣ ಹತ್ತಿರವಾಗಲಿದೆ. ಪ್ರಸಿದ್ದ ಪ್ರವಾಸಿ ಮತ್ತು ಕಾರಣಿಕ ಕ್ಷೇತ್ರಗಳಾದ ಮಜ್ಜಾರು, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಸೇರಿದಂತೆ ಮಂಗಳೂರು ಸುಳ್ಯ, ಮಡಿಕೇರಿ, ಕೇರಳ ಕಡೆಗೂ ಸಂಪರ್ಕ ಸುಲಭವಾಗಿದೆ. ಇಲ್ಲಿ ಶಾಶ್ವತ ಸೇತುವೆಯ ಬೇಡಿಕೆಗೆ ಆಗ್ರಹ ಹೆಚ್ಚಾಗಿದೆ.

kadabatimes.in

ಸಂಸದರ ಆದರ್ಶ ಗ್ರಾಮ ಬಳ್ಳ ಮತ್ತು ಕೇನ್ಯ ಗ್ರಾಮಸ್ಥರು ಆಸ್ಪತ್ರೆ, ತಾಲೂಕು ಕಚೇರಿ, ವ್ಯಾಪಾರ ವ್ಯವಹಾರ, ಶಾಲಾ ಕಾಲೇಜು ಸೇರಿದಂತೆ ತಮ್ಮ ಅಗತ್ಯತೆಗಳಿಗಾಗಿ ತಾಲೂಕು ಕೇಂದ್ರ ಕಡಬವನ್ನು ಸಂಪರ್ಕಿಸಬೇಕಾದರೆ ಸುಳ್ಯ ತಾಲೂಕಿನ ಪಂಜ ಮೂಲಕ ಸುಮಾರು 20ಕಿ.ಮೀ. ಸುತ್ತುಬಳಸಿ ಸಂಚರಿಸಬೇಕು. ಆದರೆ ತಮ್ಮ ಗ್ರಾಮದಲ್ಲಿ ಹರಿಯುತ್ತಿರುವ ಕುಮಾರಧಾರಾ ನದಿಯನ್ನು ದಾಟಿ ಕೇವಲ 6 ಕಿ.ಮೀ. ಕ್ರಮಿಸಿದರೆ ಕಡಬ ತಾಲೂಕು ಕೇಂದ್ರವನ್ನು ಮತ್ತು 3 ಕಿ.ಮೀ ಸಂಚರಿಸಿದರೆ ಮಂಗಳೂರು -ಬೆಂಗಳೂರು ನಡುವಿನ ಕೋಡಿಂಬಾಳ ರೈಲು ನಿಲ್ದಾಣವನ್ನು ತಲುಪಲು ಸಾಧ್ಯವಿದೆ.

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.