ಕಡಬ ಟೈಮ್ಸ್ (KADABA TIMES):ಮಾವಿನ ಮಿಡಿ ಕೊಯ್ಯುತ್ತಿದ್ದಾಗ ಗೆಲ್ಲು ತುಂಡಾಗಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಸುಳ್ಯದಿಂದ ವರದಿಯಾಗಿದೆ.


ಉಬರಡ್ಕದ ನೆಯ್ಯೋಣಿ ನಿವಾಸಿ ಜನಾರ್ದನ ಪೂಜಾರಿ ಮೃತಪಟ್ಟವರು. ಮಾ.22 ರಂದು ಕೆಲಸಕ್ಕೆ ಹೋಗಿದ್ದ ಅವರು ಮಾವಿನ ಮರವೇರಿ ಮಾವಿನಮಿಡಿ ಕೊಯ್ಯುತ್ತಿದ್ದಾಗ ನಿಂತಿದ್ದ ಗೆಲ್ಲು ತುಂಡಾಗಿ ಬಿದ್ದು ಇವರು ಕೂಡಾ ಕೆಳಕ್ಕೆ ಬಿದ್ದರು.






ಪರಿಣಾಮ ಸೊಂಟಕ್ಕೆ ಹಾಗೂ ತಲೆಗೆ ಗಾಯವಾಗಿತ್ತು . ತಕ್ಷಣ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.