24.4 C
Kadaba
Wednesday, April 2, 2025

ಹೊಸ ಸುದ್ದಿಗಳು

ಸವಣೂರು: ಯುವತಿಯನ್ನು ಮುಂಬೈಗೆ ಕರೆದೊಯ್ದು ಬೆದರಿಸಿ ದೈಹಿಕ ಸಂಪರ್ಕ ಆರೋಪ ಪ್ರಕರಣ

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಪೇಕ್ಷಾರ್ಹ, ಅಥವಾ ತಪ್ಪು ಮಾಹಿತಿಗಳು ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ಸ್ (KADABA TIMES): ಯುವತಿಯೋರ್ವರನ್ನು ಅಪಹರಣಗೈದು ಮುಂಬೈಗೆ ಕರೆದೊಯ್ದು ಬೆದರಿಸಿ ಒತ್ತಾಯಪೂರ್ವಕ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿಯನ್ನು ನ್ಯಾಯಾಲಯ ನಿರ್ದೋಷಿ ಎಂದು ಬಿಡುಗಡೆ ಮಾಡಿದೆ.

kadabatimes.in

ಕಡಬ ತಾಲೂಕು  ಸವಣೂರು ಗ್ರಾಮದ ಇಡ್ಯಾಡಿ ನಿವಾಸಿ ಬಾಲಕೃಷ್ಣ ಗೌಡ ಎಂಬಾತ ಯುವತಿಯನ್ನು 2020 ರ ಅಕ್ಟೋಬರ್ 8 ರಂದು ಪುತ್ತೂರಿನ ಕಲ್ಲಾರೆಯಿಂದ ತನ್ನ ರಿಕ್ಷಾದಲ್ಲಿ ಹತ್ತಿಸಿಕೊಂಡು, ಸವಣೂರು  ಕಡೆಗೆ ಹೋಗುವುದಾಗಿ ಹೇಳಿ ಕರೆದೊಯ್ದಿದ್ದರು.

kadabatimes.in

ಸರ್ವೆ ಎಂಬಲ್ಲಿಗೆ ಮುಟ್ಟಿದಾಗ ಯುವತಿಯ ಮೊಬೈಲನ್ನು ಆತ ಗೌರಿ ಹೊಳೆಗೆ ಬಿಸಾಡಿದ್ದಲ್ಲದೆ ಆಕೆಗೆ ಜೀವ ಬೆದರಿಕೆ ಒಡ್ಡಿ ರಿಕ್ಷಾವನ್ನು ವಾಪಸ್ ಪುತ್ತೂರು ಕಡೆಗೆ ತಿರುಗಿಸಿ ಸಂಬಂಧಿಕರ ಮನೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವಿಚಾರ ಯಾರಿಗೂ ತಿಳಿಸದಂತೆ ಆಕೆಗೆ ಬೆದರಿಸಿ ಮರುದಿನ   ಬೊಂಬಾಯಿಗೆ ಕರೆದುಕೊಂಡು ಹೋಗಿದ್ದ .

kadabatimes.in

ಅಲ್ಲಿ ತನ್ನ ಅಕ್ಕನ ಮನೆಗೆ ಯುವತಿಯನ್ನು ಕರೆದುಕೊಂಡು ಹೋಗಿ, ನಿನ್ನನ್ನು ಮದುವೆಯಾಗುತ್ತೇನೆ. ಇನ್ನು ನನ್ನನ್ನು ಯಾರೂ ಏನು ಮಾಡಲೂ ಆಗುವುದಿಲ್ಲ ಎಂದು ಬೆದರಿಸಿ  ಮುಂಬೈನ ನಿರ್ಮಲ ನಗರದ ಮಂದಿರವೊಂದರಲ್ಲಿ  ಮೋಸದ ಮದುವೆಯ ನಾಟಕವಾಡಿದ್ದ. ಅಲ್ಲದೆ ವಕೀಲರ ಬಳಿ ಹೋಗಿ ಮ್ಯಾರೇಜ್ ಡಿಕ್ಲೆರೇಶನ್ ಮಾಡಿಕೊಂಡಿದ್ದರು.

ಯುವತಿಯು ತನ್ನನ್ನು ಬೆದರಿಸಿ ಒತ್ತಾಯ ಪೂರ್ವಕವಾಗಿ ದೈಹಿಕ ಸಂಪರ್ಕ ಮಾಡಿದ್ದಾಗಿ ಆರೋಪಿಸಿ ದೂರು ನೀಡಿದ್ದು ಆರೋಪಿ ವಿರುದ್ದ  ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪೊಲೀಸ್ ನಿರೀಕ್ಷಕರಾದ ಕುಸುಮಾಧರ ಕೆ ಮತ್ತು ತಿಮ್ಮಪ್ಪ ನಾಯ್ಕ ಅವರು ತನಿಖೆ ನಡೆಸಿ ಆರೋಪಿ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

kadabatimes.in

ವಿಚಾರಣೆ ನಡೆಸಿದ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಕಾಂತರಾಜುರವರು 21 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಿ,ಆರೋಪಿಯ ಮೇಲೆ ಮಾಡಲಾದ ಆರೋಪವನ್ನು ರುಜುವಾತು ಪಡಿಸಿಲ್ಲ ಎಂಬ ಕಾರಣಕ್ಕಾಗಿ ಆರೋಪಿಯನ್ನು ನಿರ್ದೋಷಿ ಎಂದು ಪರಿಗಣಿಸಿ ಬಿಡುಗಡೆಗೊಳಿಸಿರುತ್ತಾರೆ. ಆರೋಪಿಯ ಪರವಾಗಿ ವಕೀಲರಾದ ದೇವಾನಂದ ಕೆ, ವಿಜಯ ಕುಮಾರ್ ಮತ್ತು ಹರಿಣಿ ವಾದಿಸಿದ್ದರು.

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.